ಅಂತೂ ಇಂತೂ ಸುವರ್ಣ ಸೌಧಕ್ಕೆ ಕಳೆ ಬರುವ ಸಮಯ ಮತ್ತೆ ಬಂದಿದೆ. ಇದೇ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಯೋದು ಫಿಕ್ಸ್… ಇಂದು ಸುವರ್ಣ ಸೌಧಕ್ಕೆ ವಿಧಾನಪರಿಷತ್ತಿನ ಸಭಾಪತಿ ಮಾನ್ಯ ಬಸವರಾಜ ಹೊರಟ್ಟಿ ಬೇಟಿ ನೀಡಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ವಿಧಾನಪರಿಷತ್ತಿನ ಸಭಾಪತಿ ಮಾನ್ಯ ಬಸವರಾಜ ಹೊರಟ್ಟಿ ಪತ್ರಿಕಾಗೋಷ್ಠಿ ಪ್ರಮುಖಾಂಶಗಳು.
* ವಿಧಾನಮಂಡಳ ಚಳಿಗಾಲದ ಅಧಿವೇಶನ 2018 ರ ನಂತರ ಬೆಳಗಾವಿಯಲ್ಲಿ ನಡೆದಿರಲಿಲ್ಲ. ಈ ಬಾರಿ ವಿಧಾನಮಂಡಳದ ಕಲಾಪಗಳ ನೇರಪ್ರಸಾರ ವ್ಯವಸ್ಥೆ ಮಾಡಲಾಗುತ್ತಿದೆ.
ಇದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಪೂರ್ವಸಿದ್ಧತೆ ಸಭೆ ನಡೆಸಲಾಯಿತು.
* ಇ-ಗವರ್ನನ್ಸ್, ಲೋಕೋಪಯೋಗಿ, ವಾರ್ತಾ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿ, ಸೂಕ್ತ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.
* ಈ ಬಾರಿ ಅಧಿವೇಶನದ ಕಲಾಪವನ್ನು ನೇರಪ್ರಸಾರ ಮಾಡಲು ನಿರ್ಧರಿಸಲಾಗಿದೆ.
* ನ.20 ರೊಳಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
* ಅಧಿವೇಶನ ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡಿಸೆಂಬರ್ ಮಾಹೆಯಲ್ಲಿ ಅಧಿವೇಶನ ನಡೆಯುವುದು ಖಚಿತವಾಗಿದೆ. ದಿನಾಂಕವನ್ನು ಸರಕಾರ ನಿರ್ಧರಿಸಲಿದೆ.
* ಶಾಸಕರ ಭವನ ನಿರ್ಮಾಣ ಬಹುಜನರ ಬೇಡಿಕೆಯಾಗಿದೆ. ಇದನ್ನು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸರಕಾರದ ಗಮನಕ್ಕೆ ತರಲಾಗುವುದು.
- Advertisement -
* ಶಾಸಕರ ಭವನದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಧಕ-ಬಾಧಕಗಳನ್ನು ಚರ್ಚಿಸಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ.
* ಸುವರ್ಣ ವಿಧಾನಸೌಧವನ್ನು ನಿರ್ಮಿಸಿ ಪ್ರತಿವರ್ಷ ಅಧಿವೇಶನ ನಡೆಸುವುದರಿಂದ ಶಾಸಕರ ಭವನ ನಿರ್ಮಿಸುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯವಾಗಿದೆ.
* ಅಧಿವೇಶನ ನಡೆಸುವಾಗ ಕಚೇರಿಗಳ ಕೆಲಸಕಾರ್ಯಗಳು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಪರಿಶೀಲಿಸಲಾಗುತ್ತಿದೆ.
- Advertisement -
* ಸುವರ್ಣ ವಿಧಾನಸೌಧಕ್ಕೆ ವಿವಿಧ ಇಲಾಖೆಗಳ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.
* ಅಧಿವೇಶನದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆ ವಜಿಸಲಾಗುವುದು.
* ಶಾಸಕರ ಹಾಜರಾತಿ ಕಡ್ಡಾಯಗೊಳಿಸಲು ಅವಕಾಶಗಳಿರುವುದಿಲ್ಲ. ಆದರೆ ಬೆಳಗಾವಿ ಅಧಿವೇಶನದ ಕಲಾಪಗಳಲ್ಲಿ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
* ಪ್ರಶ್ನೋತ್ತರ, ಶೂನ್ಯ ವೇಳೆ, ಗಮನಸೆಳೆಯುವ ಸೂಚನೆ ಸೇರಿದಂತೆ ತುರ್ತು ವಿಷಯಗಳ ಚರ್ಚೆಗೆ ನಿಯಮಾವಳಿ ಪ್ರಕಾರ ಅವಕಾಶವನ್ನು ಕಲ್ಪಿಸಲಾಗುವುದು. ಆಯಾ ದಿನದ ವಿಷಯಸೂಚಿಯ ಪ್ರಕಾರ ಕಲಾಪವನ್ನು ನಡೆಸಲಾಗುವುದು.
* ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಆದ್ಯತೆ ನೀಡಲಾಗುವುದು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ವಿಧಾನಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.